Thursday, 20 November 2014

ಆದಯ್ಯ

ಅಂಗವು ಲಿಂಗವೇಧೆಯಾದ ಬಳಿಕ
ಅಂಗವೆಲ್ಲವೂ ನಷ್ಟವಾಗಿ ಲಿಂಗತನ್ಮಯವಾಗಿಪ್ಪುದಾಗಿ
ದಿಟದಿಂದಿಪ್ಪ ಸಜ್ಜನಕ್ಕೆ ಬೇರೆ ಅಂಗವುಂಟೆ ಲಿಂಗವಲ್ಲದೆ?
ಇದು ಕಾರಣ ಸೌರಾಷ್ಟ್ರ ಸೋಮೇಶ್ವರನ ಶರಣರು ನಿರ್ದೇಹಿಗಳು.

No comments:

Post a Comment